Uncategorized

ಆರೋಪಿಗಳನ್ನ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ!

ಆರೋಪಿಗಳನ್ನ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ!

ಆರೋಪಿಗಳನ್ನ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ!

ಯಲ್ಲಾಪುರ: ದರೋಡೆಕೋರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಪೊಲೀಸರು ಅವರ ವಿರುದ್ಧ ಪ್ರತಿದಾಳಿ ನಡೆಸಿರುವ ಘಟನೆ ಯಲ್ಲಾಪುರ ಡೊಗಿನಾಳ ಬಳಿ ನಡೆದಿದೆ.

ಮುಂಡಗೋಡ ಜಮೀರ ಅಹ್ಮದ್ ದುರ್ಗಾವಾಲೆಯನ್ನು ಅಪಹರಿಸಿ, ದುಷ್ಕೃತ್ಯಕಾರರು 35 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ನಂತರ, ಎಚ್ಚರಿಕೆ ನೀಡಿ ಅವರನ್ನು ಬಿಡಲಾಯಿತು. ಈ ಪ್ರಕರಣದಲ್ಲಿ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳಿದ್ದಾರೆ ಎಂಬ ಮಾಹಿತಿ ಹಿನ್ನೆಲೆ, ಮುಂಡಗೋಡು ಪೊಲೀಸರು ದುಷ್ಕೃತ್ಯಕಾರರನ್ನು ಕಲಘಟಗಿಯಿಂದ ಬೆನ್ನಟ್ಟುತ್ತಿದ್ದರು. ಯಲ್ಲಾಪುರ ಪೊಲೀಸರು ಡೋಗಿನಾಳದ ಬಳಿ ಈ ತಂಡವನ್ನು ತಡೆದರು.

ಪೊಲೀಸರು ಐವರಿಗೂ ಶರಣಾಗುವಂತೆ ಎಚ್ಚರಿಸಿದರು. ಇದಕ್ಕೆ ಒಪ್ಪದೆ, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಿದರು. ಚಾಕು ಮತ್ತು ಸ್ಫೋಟಕ ಪದಾರ್ಥಗಳಿಂದ ದಾಳಿ ಮಾಡಿದರು. ಪ್ರತಿಯಾಗಿ, ಪೊಲೀಸರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ದುಷ್ಕರ್ಮಿಗಳು ಶರಣಾಗಲು ಒಪ್ಪದ ಕಾರಣ, ಇಬ್ಬರ ಕಾಲಿಗೆ ಗುಂಡು ಹೊಡೆದು ಆರೋಪಿಗಳನ್ನ ಬಂಧಿಸಿದ್ದಾರೆ. ಬಳಿಕ ಐವರು ಆರೋಪಿಗಳನ್ನು ಬಂಧಿಸಲಾಯಿತು. ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ನಡೆದ ಸಂಘರ್ಷದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿವೆ.

ಮುಂಡಗೋಡು ಸಿಪಿಐ ರಂಗನಾಥ ನೀಲಮ್ಮನವರ್, ಪಿಎಸ್‌ಐ ಪರಶುರಾಮ ಮತ್ತು ಯಲ್ಲಾಪುರದ ಪೊಲೀಸರು ಶಫಿ ಗಾಯಗೊಂಡಿದ್ದಾರೆ. ಗುಂಡು ಹೊಡೆತದಿಂದ ಗಾಯಗೊಂಡಿದ್ದ ಆರೋಪಿಗಳಲ್ಲಿ ಇಬ್ಬರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಮತ್ತು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಈ ಐವರು ದುಷ್ಕರ್ಮಿಗಳಲ್ಲಿ ಇಬ್ಬರ ಕಾಲಿಗೆ ಗುಂಡು ತಗುಲಿದೆ‌, ಅವರನ್ನು ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!