Uncategorized

ಶಿವರಾತ್ರಿ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ

ಶಿವರಾತ್ರಿ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ

 

ಕಾರವಾರ: ಪ್ರಸಕ್ತ ಸಾಲಿನ ಮಹಾಶಿವರಾತ್ರಿ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ. ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 160 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಫೆ.22 ಶನಿವಾರ 23 ಭಾನುವಾರ ವಾರಂತ್ಯ ದಿನವಾಗಿದ್ದು, ಫೆ.26 ರಂದು ಮಹಾಶಿವರಾತ್ರಿ ಹಬ್ಬವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರಿನಿಂದ ರಾಜ್ಯ/ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಫೆ.21 ರ ಸಂಜೆ ಹಾಗೂ ಫೆ.22, 23 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸದರಿ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!