Uncategorized

ಬಸ್ಸು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಬಸ್ಸು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

 

ಹೊನ್ನಾವರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಇರ್ವರು ಮೃತಪಟ್ಟ ಘಟನೆ ತಾಲೂಕಿನ ಉಪ್ಪೊಣಿಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಇರ್ವರು ಮೃತಪಟ್ಟಿದ್ದು, ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನೆರೆ ಜಿಲ್ಲೆಗೆ ಕರೆದೊಯ್ಯಲಾಗಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಸಂಭವಿಸಿದೆ.

ಶಿರಸಿ ರಸ್ತೆ ಬಂದ್ ಆದ ಪರಿಣಾಮ ಹೊನ್ನಾವರದಿಂದ ಮಾವಿನಗುಂಡಿ ಮಾರ್ಗವಾಗಿ ಶಿರಸಿ ಹುಬ್ಬಳ್ಳಿ ತೆರಳುತ್ತಿದ್ದ ಕೆಎಸ್.ಆರ್.ಟಿಸಿ ಬಸ್ ಗೆ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ವಾಹನದ ನಡುವೆ ಡಿಕ್ಕಿಯಾಗಿದೆ.

ಡಿಕ್ಕಿಯಾದ ಪರಿಣಾಮ ಸ್ಕಾರ್ಫಿಯೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಗೊಂಡವರನ್ನು ಆಂಬುಲೆನ್ಸ್ ಪೊಲೀಸ್ ವಾಹನದ ಮೂಲಕ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!